ಬುಧವಾರ, ಮೇ 11, 2011

ನೀನೆನ್ನ ಬಳಿಯಿರಲು

ನೀನೆನ್ನ ಬಳಿಯಿರಲು ಜಗ ತುಂಬಿ ತುಳುಕುವುದು;
ನೀನು ಹೋದರೆ ದೂರ ಶೂನ್ಯವಾಗುವುದು.
ನೀನೆನ್ನ ಜೀವನದ ಸರ್ವಸ್ವವಾಗಿರುವೆ;
ಓ ನನ್ನ ಪ್ರಿಯ ಮೂರ್ತಿ, ಎದೆಗೆ ಬಾರೈ.

ಬಿಸಿಲುರಿವ ಮರುಭೂಮಿಯಂದದಲಿ ನನ್ನೆದೆಯು
ವಿರಹದಿಂದುರಿದುರಿದು ಯೋಗಕೆಳಸುವುದು;
ಮಳೆಗರೆದು, ತಂಪಿತ್ತು, ಪರಿಹರಿಸಿ ಬೇಗೆಯನು,
ಪ್ರೇಮತೋಯದ ಮೂರ್ತಿ, ಎದೆಗೆ ಬಾರೈ.

ಅಗಲಿಕೆಯ ಸಹಿಸಲಾರೆನು ನಾನು; ನಿನ್ನನ್ನೆ
ಹಗಲಿರುಳು ನೆನೆದು ಬಗೆ ಕುದಿದು ಬೇಯುವುದು.
ಓ ನನ್ನ ಆನಂದ ಸತ್ಯಸುಂದರ ಮೂರ್ತಿ,
ಶೂನ್ಯವನು ಪೂರ್ಣಗೈ! ಎದೆಗೆ ಬಾರೈ!

                                      - ಕುವೆಂಪು
                                    ' ಪ್ರೇಮ ಕಾಶ್ಮೀರ '

ಕಾಮೆಂಟ್‌ಗಳಿಲ್ಲ: